ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Tuesday, August 21, 2007

ಕಾಲಸರ್ಪ ಯೋಗ ಮತ್ತು ಪರಿಹಾರ

ಜನ್ಮಕುಂಡಲಿಯಲ್ಲಿನ ಗ್ರಹಗತಿಗಳು ವ್ಯಕ್ತಿಯ ಶ್ರೇಯಸ್ಸಿಗೆ ಧಕ್ಕೆ ತರಲು ಸಾಧ್ಯವೇ ? ವ್ಯಕ್ತಿಯನ್ನು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಸಿ ಜೀವನದಲ್ಲಿ ಜರ್ಜರಿತನನ್ನಾಗಿ ಮಾಡುತ್ತವೆಯೆ ? ಇಂತಹ ವಿಚಾರಗಳ ಕುರಿತು ಮಾತನಾಡುವುದು ಆಗಲಿ ಅಭಿಪ್ರಾಯ ವ್ಯಕ್ತಪಡಿಸುವುದು ಆಗಲಿ ಸಾಧ್ಯವಿಲ್ಲದ ಮಾತು. ಕೆಲವರು ಇದು ಶುದ್ದ ಸುಳ್ಳು ಎಂದು ವಾದಿಸಬಹುದು. 21 ನೇ ಶತಮಾನದಲ್ಲಿ ಇದ್ದರೂ ಸಾವಿರಾರು ಜನರು ಗ್ರಹದೋಷಗಳನ್ನು ನಂಬುತ್ತಾರೆ.

ಅಂತಹ ನಂಬಿಕೆಯಲ್ಲಿ ಕಾಲಸರ್ಪ ಯೋಗವೂ ಒಂದು. ನಂಬಿಕೆ, ಅಪನಂಬಿಕೆಗಳ ನಡುವೆ ಸಾಗುತ್ತಿರುವ ನಮ್ಮ ಪಯಣ ಸದ್ಯ ತ್ರ್ಯಂಬಕೇಶ್ವರ ಎಂಬ ಗ್ರಾಮಕ್ಕೆ ಬಂದು ನಿಂತಿದೆ. ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ವ್ಯಾಪ್ತಿಗೆ ಬರುವ ಈ ಗ್ರಾಮ ಕಾಲ ಸರ್ಪ ಯೋಗ ವಿಮೋಚನೆಗೆ ಪ್ರಸಿದ್ದಿ ಪಡೆದಿದೆ ಎಂಬ ಪ್ರತೀತಿ ಇದೆ. ಗ್ರಾಮಕ್ಕೆ ತೆರಳಿ ಅಲ್ಲಿ ನಡೆಯುವ ಸರ್ಪದೋಷ ವಿಮೋಚನೆಗಳನ್ನು ಕಣ್ಣಾರೆ ಕಾಣಬೇಕು ಎಂಬ ಉತ್ಸಾಹ ಮೇಲಾಗಿ ತಣಿಯದ ಕುತೂಹಲ ನಮ್ಮನ್ನಿಂದು ತ್ರ್ಯಂಬಕ ಗ್ರಾಮಕ್ಕೆ ಬರುವಂತೆ ಮಾಡಿದೆ. ಗ್ರಾಮಕ್ಕೆ ಹೋಗುವುದಕ್ಕೆ ಎಂದು ನಾವು ಟ್ಯಾಕ್ಸಿಗೆ ಕಾಯುತ್ತಿದ್ದೆವು. ಅಲ್ಲಿಗೆ ಬಂದ ಒಂದು ಟ್ಯಾಕ್ಸಿಯನ್ನೇರಿ ತ್ರ್ಯಂಬಕದತ್ತ ಸಾಗಿತು ನಮ್ಮ ನಂಬಿಕೆ, ಅಪನಂಬಿಕೆಗಳ ಪಯಣ...



0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger