ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Saturday, October 27, 2007

ವೆಬ್‌ದುನಿಯಾ ವಾರದ ಬ್ಲಾಗ್: ನೆನಪು ನೇವರಿಕೆ

ಬ್ಲಾಗ್ ಅವಕಾಶಗಳ ಫಲವಾಗಿ ಕುಡಿಯೊಡೆದ ಪ್ರತಿಭೆಗಳಲ್ಲಿ ಸಿಂಧು ಕೂಡ ಒಬ್ಬರು. ಎಲ್ಲ ನೋಟಗಳಾಚೆಗಿನ್ನೊಂದು ಚಿತ್ರವಿದೆ ಎಂದು ತಲೆಬರಹ ಹಾಕಿಕೊಂಡು ನೆನಪು ನೇವರಿಕೆ (http://nenapu-nevarike.blogspot.com/) ನಡೆಸುತ್ತಿರುವ ಸಿಂಧು ಅವರು ಯುವ ಬ್ಲಾಗಿಗರಿಗೆ ಆದರ್ಶಪ್ರಾಯ.

ಈಗಿನ ಅನೇಕ ಯುವ ಬರಹಗಾರರು ತಮ್ಮ ಲೇಖನಗಳಲ್ಲಿ ರವಿ ಬೆಳಗೆರೆಯವರ ಬರಹಶೈಲಿಯನ್ನು ಅನುಕರಿಸಲು ಪ್ರಯತ್ನಿಸುತ್ತಾರೆ. ರವಿ ಬೆಳಗೆರೆಯಂತೆ ಸಾಮಾನ್ಯ ಇಂಗ್ಲೀಷ್ ಪದಗಳನ್ನು ಹೆಚ್ಚು ಹೆಚ್ಚಾಗಿ ಬಳಸಿ ಬೀಗುತ್ತಾರೆ. ಆದರೆ ಬೆಳಗೆರೆ ಲೇಖನಗಳಲ್ಲಿರುವ ವಾಕ್ಯಗಳ ಸರಳತೆ ಮತ್ತು ತೀಕ್ಷ್ಣತೆ, ಅವರ ನಿರೂಪಣಾ ಶೈಲಿ, ಅವರು ಮನಸ್ಸಿಗೆ ನಾಟುವ ಕ್ಷಣಗಳಿಗೆ ಹೆಚ್ಚು ಒತ್ತು ನೀಡಿ ಬರೆಯುವ ಪರಿ ನಿಜಕ್ಕೂ ಅನುಕರಣೀಯ. ದುರದೃಷ್ಟವಶಾತ್, ಯುವಬರಹಗಾರರಲ್ಲಿ ಇಂಗ್ಲೀಷ್ ಪದ ಬಳಕೆ ಮಾತ್ರವೇ ಅನುಕರಣೀಯವಾಗಿಬಿಟ್ಟಿರುತ್ತದೆ.


ನಾನು ಮಲಗಬೇಕು

ಪುಟ್ಟ ಆನೆಮರಿ ಬಹಾದುರ ಬಹಳ ಮರೆಯುವ ಮಗು. ಒಂದು ಸಲ ಅವನು ನೀರು ಕುಡಿಯುವುದು ಹೇಗೆ ಎಂಬುದನ್ನೇ ಮರೆತಿದ್ದ. ನೀರು ಕುಡಿಯಲು ನಿನ್ನ ಮೂಗು ಉಪಯೋಗಿಸಬೇಕು ಮಗೂ ಎಂದು ಅವನ ಅಮ್ಮ ಅವನಿಗೆ ಹೇಳಿದ್ದಳು.

ಈ ಸಲ ಬಹಾದುರನ ಅಮ್ಮ ಗೀತಾ ಚಿಕ್ಕಮ್ಮನನ್ನು ಭೇಟಿ ಮಾಡಲು ಹೋಗಿದ್ದರು. ಪುಟ್ಟ ಬಹಾದುರನಿಗೆ ಬಹಳ ನಿದ್ದೆ ಆದರೆ ನಿದ್ದೆ ಮಾಡುವುದು ಹೇಗೆ ಎಂಬುದೇ ನೆನಪು ಬರುತ್ತಿಲ್ಲ.


Wednesday, October 24, 2007

ಹೆಬ್ಬೆಟ್ಟು ಒತ್ತಿ ಭವಿಷ್ಯ ತಿಳಿಯಿರಿ!

ಭಾರತದಲ್ಲಿ ಅನೇಕ ವಿಧದ ಜ್ಯೋತಿಷ್ಯ ಪ್ರಕಾರಗಳಿವೆ. ಹಸ್ತ ಸಾಮುದ್ರಿಕ, ಸಂಖ್ಯಾಶಾಸ್ತ್ರ, ಗ್ರಹಕುಂಡಲಿ ಮುಂತಾದವುಗಳು ಪ್ರಮಖವಾದವುಗಳು. ನೂರಾರು ವರ್ಷಗಳಿಂದ ಪ್ರಚಲಿತದಲ್ಲಿರುವ ನಾಡಿ ಜ್ಯೋತಿಷ್ಯ ಕೂಡ ಒಂದು.

ನಂಬಿದರೆ ನಂಬಿ ಬಿಟ್ಟರೆ ಬಿಡಿ ಪಯಣದಲ್ಲಿ ಈ ಬಾರಿ ನಾವು ವೈಧೀಶ್ವರಂ ದೇವಾಲಯಕ್ಕೆ ತಮ್ಮನ್ನು ಕರೆದುಕೊಂಡು ಹೋಗುತ್ತಿದ್ದೇವೆ. ವೈಧೀಶ್ವರಂ ಮಂದಿರದ ವೈಶಿಷ್ಠ್ಯ ಎಂದರೆ ಈ ದೇವಾಲಯದ ಸುತ್ತಲೂ ನೂರಾರು ಕುಟುಂಬಗಳಿವೆ. ಅವುಗಳಿಗೆ ಜ್ಯೋತಿಷ್ಯ ಹೇಳುವುದು ಜೀವಾನಾಧಾರ ವೃತ್ತಿ . ಅಂದ ಮಾತ್ರಕ್ಕೆ ಬೇಕಾ ಬಿಟ್ಟಿ ದುಡ್ಡು ಕೀಳುತ್ತಾರೆ ಎಂದು ತಿಳಿಯಬೇಕಾಗಿಲ್ಲ. ಅವರು ಹೇಳಿದ್ದು ನೂರಕ್ಕೆ ನೂರು ಸರಿಯಾಗಿದ್ದರೆ ಮಾತ್ರ ನೀಡಿದ ಸೇವೆಗೆ ದುಡ್ಡು ತೆಗೆದುಕೊಳ್ಳುತ್ತಾರೆ.


ಮರುಮೈತ್ರಿ ತಳಮಳ: ವಿದಳನೆಯತ್ತ ದಳ

ಇಬ್ಬರ ಜಗಳದಿಂದಾಗಿ ಕೋಲಾಹಲದ ಗೂಡಾಗಿರುವ ಕರ್ನಾಟಕ ರಾಜಕೀಯ ಮತ್ತೊಂದು ಮಗ್ಗುಲಿನತ್ತ ಹೊರಳುತ್ತಿದ್ದು, ಜಾತ್ಯತೀತ ಜನತಾ ದಳ ಒಡಕಿನ ಹಂತ ತಲುಪಿದೆ.

ಪಕ್ಷದ ಬಹುತೇಕ ಶಾಸಕರು ದೇವೇಗೌಡ ಮತ್ತು ಅವರ ಕುಟುಂಬ ರಾಜಕಾರಣದ ವಿರುದ್ಧ ಬಂಡೆದಿದ್ದಾರೆ. ಮಾಜಿ ಸಚಿವ ಎಂ.ಪಿ.ಪ್ರಕಾಶ್ ಅವರನ್ನು ನಾಯಕರನ್ನಾಗಿ ಘೋಷಿಸಿಕೊಂಡಿರುವ ಶಾಸಕರು, ಕಾಂಗ್ರೆಸ್ ಜತೆ ಮರು ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಸಿದ್ಧತೆ ನಡೆಸಿದ್ದಾರೆ.


Monday, October 22, 2007

ಪರಮ ಪಾವನೆ ಭಕ್ತವತ್ಸಲೆ ಕೊಲ್ಲೂರು ಶ್ರೀಮೂಕಾಂಬಿಕೆ

ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು, ಸೌಪರ್ಣಿಕಾ ತಟದಲ್ಲಿರುವ ವಾಸ್ತುಶಿಲ್ಪ ಆಧಾರಿತ ಶಾಸ್ತ್ರೋಕ್ತವಾದ ಮಧ್ಯಮ ಗಾತ್ರದ ಶಿಲಾಮಯ ಪುಣ್ಯಕ್ಷೇತ್ರ. ಇಲ್ಲಿ ಭಕ್ತ ವತ್ಸಲೆಯಾದ ಶ್ರೀದೇವಿಯು ಮೂಕಾಂಬಿಕೆಯ ರೂಪದಲ್ಲಿ ನೆಲೆಸಿ ಭಕ್ತ ಜನಕೋಟಿಯನ್ನು ಹರಸುತ್ತಿದ್ದಾಳೆ.

ವಿಶೇಷತೆ:


ಈ ಪುಣ್ಯ ಕ್ಷೇತ್ರವು ವಿದ್ಯಾದಶಮಿ ದಿನ ನಡೆಯುವ ಅಕ್ಷರಾಭ್ಯಾಸಕ್ಕೆ ಹೆಸರುವಾಸಿ. ದೇಶದೆಲ್ಲೆಡೆಯಿಂದ ಗಣ್ಯರು, ರಾಜಕಾರಣಿಗಳು, ಉದ್ಯಮಿಗಳಿಗೆ ಭಕ್ತಿಯ ತಾಣವಿದು. ತಮಿಳುನಾಡು ಮಾಜಿ ಮುಖ್ಯಮಂತ್ರಿ/ನಟ ಎಂಜಿಆರ್ ಅವರು ಈ ಕ್ಷೇತ್ರಕ್ಕೆ ಚಿನ್ನದ ಖಡ್ಗ ಒಪ್ಪಿಸಿದ್ದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಕೋಟಿ ರೂ. ಮೌಲ್ಯದ ವಜ್ರ ಖಚಿತ ಹಸ್ತ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಒಂದು ಆನೆಯನ್ನು ಭಕ್ತಿಯಿಂದ ಸಮರ್ಪಿಸಿದ್ದಾರಲ್ಲದೆ ಚೆನ್ನೈನಿಂದ ಕೊಲ್ಲೂರಿಗೆ ಬಸ್ ಸೌಲಭ್ಯವನ್ನೂ ಕಲ್ಪಿಸಿದ್ದಾರೆ. ಉದ್ಯಮಿ ವಿಜಯ ಮಲ್ಯ ಅವರು ಧ್ವಜಸ್ಥಂಬಕ್ಕೆ ಚಿನ್ನದ ಹೊದಿಕೆ ಮಾಡಿಸಿದ್ದಾರೆ. ನಾಲ್ಕು ಕೋಟಿ ರೂ. ಅಂದಾಜು ವೆಚ್ಚದ ಸ್ವರ್ಣ ರಥ ಇಲ್ಲಿ ಗಮನ ಸೆಳೆಯುತ್ತದೆ. ಖ್ಯಾತ ಗಾಯಕ ಜೇಸುದಾಸ್ ಇಲ್ಲಿಯ ಪರಮ ಭಕ್ತರು. ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು ಸೇರಿದಂತೆ ಇವರೆಲ್ಲರೂ ಇಲ್ಲಿಗೆ ಆಗಾಗ್ಗೆ ಭೇಟಿ ನೀಡುತ್ತಿರುತ್ತಾರೆ.


ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger