ವೆಬ್ ಲೋಕದಲ್ಲಿ ಹೊಳೆಯುವ ನಕ್ಷತ್ರ...!

Monday, August 20, 2007

ಮದ್ಯಂತರ ಚುನಾವಣೆಗೆ ಕಾಂಗ್ರೆಸ್ ಆದ್ಯತೆ: ಖರ್ಗೆ

ಬೆಂಗಳೂರು: ಸಮ್ಮಿಶ್ರ ಸರಕಾರದಲ್ಲಿ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ತಿಕ್ಕಾಟವನ್ನು ಗಮನಿಸಿರುವ ವಿರೋಧ ಪಕ್ಷ ಕಾಂಗ್ರೆಸ್ ಒಂದು ವೇಳೆ ಬಿಜೆಪಿ ಮತ್ತು ಜೆಡಿ ಎಸ್ ನಡುವೆ ಅಧಿಕಾರ ಹಸ್ತಾಂತರ ಸಮಸ್ಯೆಯಾಗಿ ಪರಿಣಮಿಸಿದರೆ, ತಾನು ಜೆಡಿಎಸ್ ಜೊತೆ ಮತ್ತೆ ಕೈಗೂಡಿಸಿ ಅಧಿಕಾರಕ್ಕೆ ಏರುವುದಿಲ್ಲ. ಸಮ್ಮಿಶ್ರ ಸರಕಾರದ ರಚನೆಗೆ ಬದಲು ಮದ್ಯಂತರ ಚುನಾವಣೆಗೆ ಆದ್ಯತೆ ನೀಡುವುದಾಗಿ ತನ್ನ ನಿಲುವು ಪ್ರಕಟಿಸಿದೆ.

ಗುಲ್ಬರ್ಗಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮ್ಮಿಶ್ರ ಸರಕಾರದಲ್ಲಿ ಬಿಕ್ಕಟ್ಟು ಉಂಟಾದಲ್ಲಿ, ಬಿಜೆಪಿ ಅಥವಾ ಜೆಡಿಎಸ್ ಪಕ್ಷಗಳೊಂದಿಗೆ ಕೈಗೂಡಿಸುವುದಕ್ಕೆ ಕಾಂಗ್ರೆಸ್ ಮುಂದಾಗದು. ಚುನಾವಣೆಯಲ್ಲಿ ಸ್ಪರ್ಧಿಸಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳುವುದು ಸರಿಯಾದ ಮಾರ್ಗ ಎಂದು ಹೇಳಿದ್ದಾರೆ.

ಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

0 comments:

ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?

About Me

My photo
Chennai, India
Kannada Portal With Lots of Online options in Kannada- Games, Greetings, Mail, Quiz, Dosti community site and more...

Blog Archive

Powered By Blogger